37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ
ಉಡುಪಿ: ವಿಜಯಪುರ ಜಿಲ್ಲೆ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾಯಿಸಿದೆ.
ಕಳೆದೊಂದು ವರ್ಷಕ್ಕೂ ಅಧಿಕ ಸಮಯ ಉಡುಪಿ ಎಡಿಸಿಯಾಗಿ ಕಾರ್ಯ ನಿರ್ವಹಿಸಿದ್ದ ಮಮತಾದೇವಿ ಅವರನ್ನು ಕಳೆದ ತಿಂಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.