.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ

ಉಡುಪಿ: ವಿಜಯಪುರ ಜಿಲ್ಲೆ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾಯಿಸಿದೆ.

ಕಳೆದೊಂದು ವರ್ಷಕ್ಕೂ ಅಧಿಕ ಸಮಯ ಉಡುಪಿ ಎಡಿಸಿಯಾಗಿ ಕಾರ್ಯ ನಿರ್ವಹಿಸಿದ್ದ ಮಮತಾದೇವಿ ಅವರನ್ನು ಕಳೆದ ತಿಂಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಅಬೀದ ಗದ್ಯಾಳ ಅವರನ್ನು ಖಾಲಿ ಇರುವ ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.

No Comments

Leave A Comment