ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.
Cyclone: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ, 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ
ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನಾಗಾಲ್ಯಾಂಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಗಾಳಿ ಪ್ರದೇಶವು ರೂಪುಗೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ, ಫೆಬ್ರವರಿ 15-21ರ ಅವಧಿಯಲ್ಲಿ ಈಶಾನ್ಯ ಭಾರತದಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.
ಫೆಬ್ರವರಿ ತಿಂಗಳು ಮುಂದುವರೆದಂತೆ, ದೇಶಾದ್ಯಂತ ತಾಪಮಾನ ನಿರಂತರವಾಗಿ ಏರುತ್ತಿದೆ. ಆದಾಗ್ಯೂ, ಫೆಬ್ರವರಿ 19 ರಂದು ಈಶಾನ್ಯದ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಫೆಬ್ರವರಿ 19 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಏಳು ದಿನಗಳವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ, ಅರುಣಾಚಲ ಪ್ರದೇಶದಲ್ಲಿ ಹಿಮಪಾತ ಮತ್ತು ಮಳೆಯಾಗಿದ್ದು, ಇತರ ಭಾಗಗಳಲ್ಲಿ ಭಾರೀ ಮಳೆಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಫೆಬ್ರವರಿ 19-20 ರಂದು ಉತ್ತರಾಖಂಡದಲ್ಲೂ ಇದೇ ಪರಿಸ್ಥಿತಿ ಮುಂದುವರಿಯಲಿದೆ.
ಫೆಬ್ರವರಿ 17 ರಿಂದ 19 ರವರೆಗೆ ರಾಜಸ್ಥಾನದಲ್ಲಿ ಮತ್ತು ಫೆಬ್ರವರಿ 19-20 ರವರೆಗೆ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ಪಂಜಾಬ್ನ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ರಬಿ ಬೆಳೆಯ ರೈತರ ಮುಖದಲ್ಲಿ ನಗು ಮೂಡಿದೆ.
ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ತಾಪಮಾನವು ಸ್ಥಿರವಾಗಿ ಏರುತ್ತಿದೆ, ದೆಹಲಿ-ಎನ್ಸಿಆರ್, ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚಳಿ ಕ್ರಮೇಣ ಕಡಿಮೆಯಾಗುತ್ತಿದೆ. ದಿನವಿಡೀ ಪ್ರಕಾಶಮಾನವಾದ ಬಿಸಿಲು ಮುಂದುವರಿದಂತೆ, ಬಿಸಿಲ ಝಳವೂ ಹೆಚ್ಚಿದೆ. ಆದರೆ ಗುಡ್ಡಗಾಡು ಪ್ರದೇಶಗಳಲ್ಲಿ ಹಗುರವಾದ ಮಳೆ ಮತ್ತು ಹಿಮಪಾತವು ಮುಂದುವರೆದಿದೆ. ಏತನ್ಮಧ್ಯೆ, ಮೋಡ ಕವಿದ ವಾತಾವರಣದಿಂದಾಗಿ ಹಲವಾರು ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಉತ್ತರ ಪ್ರದೇಶದ ಪಶ್ಚಿಮ ಮತ್ತು ಪೂರ್ವ ಭಾಗಗಳಲ್ಲಿ ಹವಾಮಾನವು ಶುಷ್ಕವಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಬೆಳಗ್ಗೆ ಮತ್ತು ರಾತ್ರಿ ವೇಳೆ ಮಂಜು ಬೀಳುವ ಸಾಧ್ಯತೆಯಿದೆ.