....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಬೈಕ್ಗಳ ಮುಖಾಮುಖಿ ಢಿಕ್ಕಿ: ಓರ್ವ ಸವಾರ ಮತ್ಯು, ಇಬ್ಬರಿಗೆ ಗಾಯ
ಮಲ್ಪೆ: ಎರಡು ಬೈಕ್ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಫೆ.17ರಂದು ರಾತ್ರಿ 8.45ರ ಸುಮಾರಿಗೆ ಅಜ್ಜರಕಾಡು ಅಗ್ನಿಶಾಮಕ ದಳದ ಕಚೇರಿ ಎದುರು ನಡೆದಿದೆ.
ಮೃತರನ್ನು ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿ ಸಲಾಗಿದೆ. ಬೈಕ್ನಲ್ಲಿ ಇವರ ಪತ್ನಿ ಲಾನೆಟ್ ಸ್ಮಿತ ಕರ್ಕಡ(48) ಹಾಗೂ ಬೈಕ್ ಸವಾರ ಜಯಲಕ್ಷ್ಮೀ ಸಿಲ್ಕ್ಸ್ ಉದ್ಯೋಗಿ ಪವನ್ ಎಂಬವರು ಗಾಯಗೊಂಡಿದ್ದಾರೆ.
ಸದಾನಂದ ಕರ್ಕಡ ತನ್ನ ಪತ್ನಿಯೊಂದಿಗೆ ಬೈಕ್ನಲ್ಲಿ ಅಜ್ಜರಕಾಡು ಪಾರ್ಕ್ ಬಳಿಯ ಅಂಗಡಿಯಿಂದ ಸಾಮಾನು ಖರೀದಿಸಲು ಕಿನ್ನಿಮುಲ್ಕಿಯ ಸ್ವಾಗತ ಗೋಪುರ ಕಡೆಯಿಂದ ಅಜ್ಜರಕಾಡು ಕ್ರೀಡಾಂಗಣದ ರಸ್ತೆಯಲ್ಲಿ ಹೋಗುತ್ತಿದ್ದು, ಈ ವೇಳೆ ಎದುರಿನಿಂದ ಅಂದರೆ ಬ್ರಹ್ಮಗಿರಿ ಕಡೆಯಿಂದ ಕಿನ್ನಿಮೂಲ್ಕಿಯ ಕಡೆಗೆ ಬರುತ್ತಿದ್ದ ಬೈಕ್, ಸದಾನಂದ ಅವರ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸದಾನಂದ ಕರ್ಕಡ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಎಷ್ಟೇ ವಿದೇಶದಿಂದ ಆಗಮಿಸಿದ್ದರು. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.