.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್
ದೆಹಲಿ:ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ ಎಂದು ಹೇಳಿದರು.
ಇದೇ ವೇಳೆ ವಿವೇಕ್ ಜೋಶಿ ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಹರಿಯಾಣ ಕೇಡರ್ನ ಮಾಜಿ ಐಎಎಸ್ ಅಧಿಕಾರಿಯಾಗಿರುವ ಜೋಶಿ ಅವರು ಸೋಮವಾರ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.