...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಹರಿದ ಬಸ್: ಇಬ್ಬರ ಸಾವು

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ  ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್‌ ಎಂಬುವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment