.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ: ಮಲ್ಪೆ ಬಳಿ ಓಮಾನ್ ಮೀನುಗಾರಿಕಾ ದೋಣಿ ಪತ್ತೆ-ಹಡಗು ವಶಕ್ಕೆ
ಉಡುಪಿ:ಫೆ.25 :ಚಿತ್ರಹಿಂಸೆ ಮತ್ತು ಶೋಷಣೆಗೆ ಒಳಗಾಗಿ ಓಮನ್ನಿಂದ ಪರಾರಿಯಾಗಿದ್ದ ತಮಿಳುನಾಡಿನ ಮೂವರು ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ಓಮಾನ್ ಮೂಲದ ಮೀನುಗಾರಿಕಾ ದೋಣಿ ಮಲ್ಪೆ ಸೇಂಟ್ ಮೇರಿಸ್ ದ್ವೀಪದ ಬಳಿ ಪತ್ತೆಯಾಗಿದೆ.
ಓಮಾನ್ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರಿಗೆ ಕೂಲಿ, ಆಹಾರ ಕೊಡದೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ.
ಕೋಸ್ಟ್ ಗಾರ್ಡ್ ಪ್ರಕಾರ, ಬೋಟ್ ಮಾಲೀಕರು ತಮ್ಮ ಪಾಸ್ಪೋರ್ಟ್ಗಳನ್ನು ಮುಟ್ಟುಗೋಲು ಹಾಕಿಕೊಂಡು ಚಿತ್ರಹಿಂಸೆಗೆ ಒಳಗಾದ ನಂತರ ಮೀನುಗಾರರು ಪ್ರಾಣಭಯದಿಂದ ಓಮನ್ ಬಂದರಿನಿಂದ ತಪ್ಪಿಸಿಕೊಂಡು ಬಂದಿದ್ದಾರೆ ತಿಳಿದುಬಂದಿದೆ.
ಮೀನುಗಾರರು ಸಮುದ್ರದ ಮೂಲಕ ಸುಮಾರು 4,000 ಕಿ.ಮೀ ಪ್ರಯಾಣಿಸಿ ಭಾರತದ ಕರಾವಳಿಯನ್ನು ತಲುಪಿದ್ದಾರೆ ಎಂದು ವರದಿಯಾಗಿದೆ. ಕಾರವಾರ ಮಾರ್ಗವಾಗಿ ಮಲ್ಪೆ ಕಡೆಗೆ ತೆರಳುತ್ತಿದ್ದ ವಿದೇಶಿ ಹಡಗಿನಲ್ಲಿ ಡೀಸೆಲ್ ಖಾಲಿಯಾಗಿ ಮೀನುಗಾರರು ಆಹಾರ, ಹಣವಿಲ್ಲದೆ ಪರದಾಡುವಂತಾಯಿತು. ಮಲ್ಪೆ ಸೇಂಟ್ ಮೇರಿಸ್ ದ್ವೀಪದ ಬಳಿ ಸ್ಥಳೀಯ ಮೀನುಗಾರರು ಹಡಗನ್ನು ಗಮನಿಸಿ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದಾರೆ.
ಕರಾವಳಿ ರಕ್ಷಣಾ ಪಡೆ ದೋಣಿಯನ್ನು ವಶಪಡಿಸಿಕೊಂಡು ಮೀನುಗಾರರನ್ನು ವಶಕ್ಕೆ ಪಡೆದಿದೆ. ದಾಖಲೆಗಳಿಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.