ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

Hampi Utsav 2025: 3 ದಿನಗಳ ಅದ್ಧೂರಿ ಉತ್ಸವಕ್ಕೆ ಚಾಲನೆ, ಮೊದಲನೇ ದಿನ 1.5 ಲಕ್ಷ ಮಂದಿ ಭಾಗಿ

ಹಂಪಿ: ವಿಜಯನಗರದ ಗತವೈಭವ ಸಾರವ 3 ದಿನಗಳ ಹಂಪಿ ಉತ್ಸವಕ್ಕೆ ಕನ್ನಡ ಮತ್ತು ಸಾಂಸ್ಕೃತಿಕ ಸಚಿವ ಶಿವರಾಜ್ ತಂಗಡಗಿ ಅವರ ಸಮ್ಮುಖದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ವಿಧ್ಯುಕ್ತ ಚಾಲನೆ ನೀಡಿದರು.

ಹಂಪಿ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿತ್ತು,ಆದರೆ ಮಂಡಿನೋವಿಂದ ಬಳಲುತ್ತಿರುವ ಅವರು ಬಾರದ ಕಾರಣ ಜಮೀರ್ ಅವರೇ ಉತ್ಸವಕ್ಕೆ ಚಾಲನೆ ನೀಡಿದರು. ಉತ್ಸವದ ಉದ್ಘಾಟನಾ ದಿನದಂದು ಸುಮಾರು 1.5 ಲಕ್ಷ ಮಂದಿ ಭಾಗಿಯಾಗಿದ್ದರು.

ಉತ್ಸವದಲ್ಲಿ ಹೂವು ಮತ್ತು ಮೀನು ಪ್ರದರ್ಶನಗಳು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸಿದವು. ಹಂಪಿ ಬೈ ಸ್ಕೈ ಹೆಲಿಕಾಪ್ಟರ್ ಸೇವೆಯು ಜನರ ಕಣ್ಮನ ಸೆಳೆಯಿತು. ಅಧಿಕಾರಿಗಳು ರೂ 3,999 ದರದೊಂದಿಗೆ ಹಂಪಿ ಸ್ಮಾರಕಗಳನ್ನು ಹೆಲಿಕಾಪ್ಟರ್ ಗಳ ಮೂಲಕ ನೋಡಲು ಅವಕಾಶ ಮಾಡಿಕೊಟ್ಟರು.

ಇದಲ್ಲದೆ, ಎತ್ತುಗಳು ಹಾಗಾ ಶ್ವಾನಗಳ ಪ್ರದರ್ಶನ ಕೂಡ ಪ್ರವಾಸಿಗರ ಗಮನ ಸೆಳೆಯಿತು. ಉತ್ಸವಕ್ಕೆ ಜಿಲ್ಲಾಡಳಿತ ಮಂಡಳಿ ಉತ್ತಮ ವ್ಯವಸ್ಥೆಗಳನ್ನು ಮಾಡಿದ್ದು, ಇದರಿಂದ ತಾಪಮಾನ 38 ಡಿಗ್ರಿ ಇದ್ದರೂ ಉತ್ಸವದಲ್ಲಿ ಪಾಲ್ಗೊಳ್ಳುವ ಜನರ ಸಂಖ್ಯೆ ಮಾತ್ರ ಕಡಿಮೆಯಾಗಿರಲಿಲ್ಲ.

ಜಿಲ್ಲಾಡಳಿತ ಮಂಡಳಿಯು 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಉಚಿತ ಕುಡಿಯುವ ನೀರು, 10 ಸ್ಥಳಗಳಲ್ಲಿ ವೈದ್ಯಕೀಯ ಶಿಬಿರಗಳು ಹಾಗೂ ಬಿಸಿಲ ಝಳ ಕಡಿಮೆ ಮಾಡಲು ನೀರು ಸಿಂಪಡಿಸುವ ಯಂತ್ರಗಳನ್ನು ಅಳವಡಿಸಿದ್ದರು.

ಇನ್ನು ಆಹಾರ ಮತ್ತು ಪುಸ್ತಕ ಮಳಿಗೆಗಳು ಮತ್ತು ಜಲಕ್ರೀಡೆ ಚಟುವಟಿಕೆಗಳೂ ಜನರ ಕಣ್ಮನ ಸೆಳೆಯಿತು. ಜನರ ಅನುಕೂಲಕ್ಕಾಗಿ ಕಂಪ್ಲಿ ಮತ್ತು ಹೊಸಪೇಟೆಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

No Comments

Leave A Comment