ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉತ್ತರಾಖಂಡದಲ್ಲಿ ಭಾರೀ ಹಿಮಪಾತ: 46 ಮಂದಿ ರಕ್ಷಣೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) 55 ಕಾರ್ಮಿಕರ ಪೈಕಿ ಈವರೆಗೂ 46 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.

ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು (ಶನಿವಾರ) ರಕ್ಷಣಾ ಪಡೆಗಳು 14 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದೆ. 14 ಮಂದಿಯ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರೀ ಹಿಮಪಾತದ ಕಾರಣ ಶುಕ್ರವಾರ ಸಂಜೆ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹವಾಮಾನ ಬದಲಾದ ಬಳಿಕ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ.

ಚಮೋಲಿಯ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿರುವ ಕುರಿತು ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಪುನರಾರಂಭಿಸಲಾಗಿದ್ದು, ಇಂದು 14 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ವೈದ್ಯಕೀಯ ನೆರವು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮನ ಸೇನಾ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.

ಡಿಫೆನ್ಸ್ ಲೆ. ಕರ್ನಲ್ ಮನೀಶ್ ಶ್ರೀವಾಸ್ತವ ಅವರು ಮಾತನಾಡಿ, ಹಿಮಕುಸಿತದ ನಂತರ ಚಮೋಲಿ ಜಿಲ್ಲೆಯ ಮನ ಗ್ರಾಮದಲ್ಲಿ ಭಾರತೀಯ ಸೇನೆಯ ಐಬಿಎಕ್ಸ್ ಬ್ರಿಗೇಡ್‌ನ ಏಳು ಅಧಿಕಾರಿಗಳು, 17 ಜೆಸಿಒಗಳು ಮತ್ತು 150 ಸಿಬ್ಬಂದಿಗಳನ್ನು ಒಳಗೊಂಡ ರಕ್ಷಣಾ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) 55 ಕಾರ್ಮಿಕರ ಪೈಕಿ ಈವರೆಗೂ 46 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.

ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು (ಶನಿವಾರ) ರಕ್ಷಣಾ ಪಡೆಗಳು 14 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದೆ. 14 ಮಂದಿಯ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರೀ ಹಿಮಪಾತದ ಕಾರಣ ಶುಕ್ರವಾರ ಸಂಜೆ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹವಾಮಾನ ಬದಲಾದ ಬಳಿಕ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ.

ಚಮೋಲಿಯ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿರುವ ಕುರಿತು ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಪುನರಾರಂಭಿಸಲಾಗಿದ್ದು, ಇಂದು 14 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ವೈದ್ಯಕೀಯ ನೆರವು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮನ ಸೇನಾ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.

ಡಿಫೆನ್ಸ್ ಲೆ. ಕರ್ನಲ್ ಮನೀಶ್ ಶ್ರೀವಾಸ್ತವ ಅವರು ಮಾತನಾಡಿ, ಹಿಮಕುಸಿತದ ನಂತರ ಚಮೋಲಿ ಜಿಲ್ಲೆಯ ಮನ ಗ್ರಾಮದಲ್ಲಿ ಭಾರತೀಯ ಸೇನೆಯ ಐಬಿಎಕ್ಸ್ ಬ್ರಿಗೇಡ್‌ನ ಏಳು ಅಧಿಕಾರಿಗಳು, 17 ಜೆಸಿಒಗಳು ಮತ್ತು 150 ಸಿಬ್ಬಂದಿಗಳನ್ನು ಒಳಗೊಂಡ ರಕ್ಷಣಾ ಪಡೆಯನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

No Comments

Leave A Comment