ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೋಟಿ ಕೋಟಿ ವಹಿವಾಟು ನಡೆಸುವ ಮೀನುಗಾರಿಕೆಗೆ ತಟ್ಟಿದ ತಾಪಮಾನದ ಬಿಸಿ: ಮೀನು ಸಿಗದೆ ಕಂಗಾಲಾದ ಮೊಗವೀರರು

ರಾಜ್ಯ ಕರಾವಳಿಯಲ್ಲಿ ಬಿಸಿಗಾಳಿಯ ಜೊತೆ ಉಷ್ಣಾಂಶ ಏರಿಕೆಯಾಗಿ ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ನಡುವೆ ಸಮುದ್ರದಲ್ಲಿಯು ತಾಪಮಾನ ಹೆಚ್ಚಾಗಿ ಮತ್ಸ್ಯಕ್ಷಾಮ ಉಂಟಾಗಿದೆ. ಮನುಷ್ಯರಂತೆ ಮೀನುಗಳು ಸಹ ತಂಪಾದ ಸ್ಥಳ ಹುಡುಕಿಕೊಂಡು ಹೋದುದರ ಪರಿಣಾಮ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಬಂದರಿನಲ್ಲೇ ಲಂಗರು ಹಾಕಿದೆ.

ಕಡಲನಗರಿ ಮಂಗಳೂರಿನಲ್ಲಿ ಹೊರಗೆ ಕಾಲಿಟ್ಟರೆ ಬಿಸಿ ಬಿಸಿ ಕೆಂಡದ ವಾತಾವರಣದಲ್ಲಿರುವ ಅನುಭವವಾಗುತ್ತಿದೆ. ಬಿಸಿಗಾಳಿಯ ಜೊತೆ ತಾಪಮಾನ ಏರಿಕೆಯಾಗಿರುವ ಪರಿಣಾಮ ಜನರಿಗೆ ಈಗಿನ ತಾಪಮಾನ ಸಹಿಸಲು ಅಸಾಧ್ಯವಾಗಿದೆ. ಈ ನಡುವೆ ಸಾವಿರಾರು ಕೋಟಿ ವಹಿವಾಟು ನಡೆಸುವ ಮೀನುಗಾರಿಕೆಗೂ ತಾಪಮಾನದ ಬಿಸಿ

ಸಮುದ್ರದಲ್ಲಿ ಹೆಚ್ಚಾದ ತಾಪಮಾನದಿಂದ, ಹವಾಮಾನ ವೈಪರೀತ್ಯದಿಂದಾಗಿ ಮೀನುಗಳು ಮೀನುಗಾರರ ಬಲೆಗೆ ಬೀಳುತ್ತಿಲ್ಲ. ಪರಿಣಾಮ ಮೀನುಗಾರಿಕೆಗೆ ತೆರಳುತ್ತಿರುವ ಮೀನುಗಾರರು ಲಕ್ಷಾಂತರ ರೂ. ನಷ್ಟಕ್ಕೊಳಗಾಗುತ್ತಿದ್ದಾರೆ. ಮಂಗಳೂರು ಬಂದರಿನಲ್ಲಿ 1500ಕ್ಕೂ ಹೆಚ್ಚು ಆಳಸಮುದ್ರ ಮೀನುಗಾರಿಕಾ ಬೋಟ್‌ಗಳಿವೆ. ಮೇ ತಿಂಗಳ ಅಂತ್ಯದವರೆಗೆ ಈ ಬೋಟ್‌ಗಳು ನಿರಂತರವಾಗಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿರುತ್ತವೆ. ಆದರೆ ಇದೀಗ ಸಾವಿರಕ್ಕೂ ಅಧಿಕ ಬೋಟ್​​ಗಳು ಮೀನುಗಾರಿಕೆಗೆ ತೆರಳದೇ ಬಂದರಿನಲ್ಲೇ ಲಂಗರು ಹಾಕಿವೆ.

ಸಮುದ್ರದಲ್ಲಿ ಮೀನುಗಳು ಕೂಡ ತಮ್ಮ ಜೀವ ರಚನೆಗೆ ಬೇಕಾದ ತಾಪಮಾನವನ್ನು ಬಯಸುತ್ತವೆ. ಅದು ಸಿಗದೆ ಇದ್ದಾಗ ಅವುಗಳು ಸಮುದ್ರದಾಳಕ್ಕೆ ಹೋಗಿ ಬದುಕುತ್ತವೆ. ಮೀನುಗಳು ಸಮುದ್ರದಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿರುವಾಗ ಮೀನುಗಾರರ ಬಲೆಗೆ ಸುಲಭವಾಗಿ ಬೀಳುತ್ತವೆ. ಆದರೆ ಯಾವಾಗ ಅವುಗಳು ಸಮುದ್ರದಾಳದಲ್ಲಿ ಆಶ್ರಯ ಪಡೆಯುತ್ತವೆಯೋ ಅಂತಹ ಸಂದರ್ಭದಲ್ಲಿ ಮೀನುಗಾರರ ಬಲೆಗೆ ಸಿಗುವುದಿಲ್ಲ. ಇದೀಗ ಇಂತಹದ್ದೇ ಪರಿಸ್ಥಿತಿ ಮೀನುಗಾರರಿಗೆ ಸಂಕಷ್ಟವನ್ನು ತಂದೊಡ್ಡಿದೆ.

ಆಳಸಮುದ್ರಕ್ಕೆ ಹೋಗುವ ಮೀನುಗಾರಿಕಾ ಬೋಟ್​​ಗಳು 10 ರಿಂದ 13 ದಿನ ಸಮುದ್ರದಲ್ಲಿ ಮೀನುಗಳ ಬೇಟೆಯಾಡಿ ಮತ್ತೆ ಬಂದರಿಗೆ ಬರುತ್ತವೆ. ಈ ವೇಳೆ ಹೋಗಿ ಬರೋದಕ್ಕೆ ಒಂದು ಬೋಟಿಗೆ 6 ಲಕ್ಷ ರೂ ಖರ್ಚು ತಗುಲುತ್ತದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಬೋಟ್​​ಗಳಿಗೆ 2 ಲಕ್ಷ ರೂನಷ್ಟು ಮಾತ್ರವೇ ಮೀನುಗಳು ಸಿಗುತ್ತಿವೆ. ಇದರಿಂದಾಗಿ ಅಂದಾಜು 4 ಲಕ್ಷ ರೂವರೆಗೆ ಮತ್ಸೋದ್ಯಮಿಗಳು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಕಾರಣದಿಂದ ನಷ್ಟ ಬೇಡ ಎಂದು ಬೋಟ್​​ಗಳನ್ನು ಮೀನುಗಾರಿಕೆಗೆ ಕಳುಹಿಸದೇ ಬಂದರಿನಲ್ಲಿ ಲಂಗರು ಹಾಕುತ್ತಿದ್ದಾರೆ.

ಹಿಂದೆ ಫೆಬ್ರವರಿ, ಮಾರ್ಚ್​ನಲ್ಲಿ ಉತ್ತಮ ಮೀನುಗಾರಿಕೆ ಆಗುತ್ತಿತ್ತು. ಆದರೆ ಈ ಬಾರಿ ಲಾಭದಾಯಕ ತಿಂಗಳಲ್ಲೇ ಹವಮಾನ ವೈಪರೀತ್ಯ ಆಗಿರುವುದರಿಂದ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮುಂದೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಜನ ಚಿಂತೆಗೀಡಾಗಿದ್ದಾರೆ.

ಹಿಂದೆ ಫೆಬ್ರವರಿ, ಮಾರ್ಚ್​ನಲ್ಲಿ ಉತ್ತಮ ಮೀನುಗಾರಿಕೆ ಆಗುತ್ತಿತ್ತು. ಆದರೆ ಈ ಬಾರಿ ಲಾಭದಾಯಕ ತಿಂಗಳಲ್ಲೇ ಹವಮಾನ ವೈಪರೀತ್ಯ ಆಗಿರುವುದರಿಂದ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮುಂದೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಜನ ಚಿಂತೆಗೀಡಾಗಿದ್ದಾರೆ.

kiniudupi@rediffmail.com

No Comments

Leave A Comment