....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಪಂಜಾಬ್‌:ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ

ಪಂಜಾಬ್‌:ಮಾ,14.ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದರು ಎನ್ನಲಾಗಿದೆ, ಆದರೆ ಗುಂಡು ಮಂಗಾನ ಕೈಯಿಂದ ತಪ್ಪಿ 12 ವರ್ಷದ ಬಾಲಕನಿಗೆ ತಗುಲಿತು ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಕೋರರು ಬೆನ್ನಟ್ಟಿದಾಗ ಮಂಗಾ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಿದ್ದಾನೆ, ತದನಂತರ ದಾಳಿಕೋರರು ಮತ್ತೊಮ್ಮೆ ಮಂಗಾ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಬಾಲಕನನ್ನು ಆರಂಭದಲ್ಲಿ ಮೋಗಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚುವರಿ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

No Comments

Leave A Comment