....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ 4ರೂ ಏರಿಕೆ
ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.
ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಹಕರಿಗೆ ಹಾಲು ಬಿಸಿತುಪ್ಪವಾಗಿದೆ.