37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...
ಕಲಬುರಗಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಹಕ್ಕು ಆಯೋಗದ ಆಯುಕ್ತ
ಕಲಬುರಗಿ: ಕಪ್ಪು ಪಟ್ಟಿಯಲ್ಲಿರುವ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ರೂ. 1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಗುರುವಾರ ರೂ. 1 ಲಕ್ಷದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.