.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಅಳವಡಿಸಿದ್ದ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್ ವಿಧಿವಶ
ಬೆಂಗಳೂರು, ಮಾರ್ಚ್ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಗರುಡಾಚಾರ್ ಅವರು ಟ್ರಾಫಿಕ್ ಡಿಸಿಪಿ ಆಗಿದ್ದರು.