.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಅಳವಡಿಸಿದ್ದ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್‌ ವಿಧಿವಶ

ಬೆಂಗಳೂರು, ಮಾರ್ಚ್​ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್‌ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಗರುಡಾಚಾರ್ ಅವರು ಟ್ರಾಫಿಕ್ ಡಿಸಿಪಿ ಆಗಿದ್ದರು.

No Comments

Leave A Comment