ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ; ಯುಗಾದಿ ಹಬ್ಬದ ಪರ್ವಕಾಲದಲ್ಲಿ “ಗಿಂಡಿನರ್ತನ” ಸೇವೆ

ಉಡುಪಿ:ಮಾ.30: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಹಾಗೂ ಯುಗಾದಿ ಹಬ್ಬದ ಪರ್ವಕಾಲದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಭ ರುಖುಮಾಯಿ ಸನ್ನಿಧಿಯಲ್ಲಿ ಪುರಾಣ ಪ್ರಸಿದ್ಧ “ ಗಿಂಡಿನರ್ತನ ಸೇವೆ “ನಡೆಯಿತು.

ಗಿಂಡಿ ನರ್ತನ ಕಲಾವಿದರಾದ ನಾಡಾ ಸತೀಶ್ ನಾಯಕ್, ಚೇಂಪಿ ರಾಮಚಂದ್ರ ಅನಂತ ಭಟ್ ಉಡುಪಿ , ಪ್ರಶಾಂತ್ ಆಚಾರ್ಯ ಬಸ್ರುರು ಇವರು ಗಿಂಡಿನರ್ತನ ನೆಡೆಸಿಕೊಟ್ಟರು , ಹಿಮ್ಮೇಳನದ ಹಾಡುಗಾರಿಕೆಯಲ್ಲಿ ಸಗ್ರಿ ಗಣೇಶ್ ನಾಯಕ್ , ಸಗ್ರಿ ವಿನೀತ್ ನಾಯಕ್ , ಹಾರ್ಮೋನಿಯಂ ತೋನ್ಸೆ ದತ್ತಾತ್ರೇಯ ಕಿಣಿ  , ತಬಲಾದಲ್ಲಿ ಜಯದೇವ್ ಭಟ್ ಕಲ್ಯಾಣಪುರ ಸಹಕರಿಸಿದರು.

ದೇವಳದ ಪ್ರಧಾನ ಅರ್ಚಕರಾದ ವಿನಾಯಕ ಭಟ್ ,ಮೊಕ್ತೇಸರ ಪಿ ವಿ ಶೆಣೈ ,ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರು ವಿವಿಧ ಭಜನಾ ಮಂಡಳಿಯ ಸದಸ್ಯರು, ಜಿ ಎಸ್ ಬಿ ಮಹಿಳಾ ಮಂಡಳಿ ಸದಸ್ಯರು , ಯುವಕ ಮಂಡಳಿಯ ಸದಸ್ಯರು ನೂರಾರು ಸಮಾಜಭಾಂದವರು ಉಪಸ್ಥಿತರಿದ್ದರು.

 

No Comments

Leave A Comment