....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ; ಯುಗಾದಿ ಹಬ್ಬದ ಪರ್ವಕಾಲದಲ್ಲಿ “ಗಿಂಡಿನರ್ತನ” ಸೇವೆ

ಉಡುಪಿ:ಮಾ.30: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಹಾಗೂ ಯುಗಾದಿ ಹಬ್ಬದ ಪರ್ವಕಾಲದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಭ ರುಖುಮಾಯಿ ಸನ್ನಿಧಿಯಲ್ಲಿ ಪುರಾಣ ಪ್ರಸಿದ್ಧ “ ಗಿಂಡಿನರ್ತನ ಸೇವೆ “ನಡೆಯಿತು.

ಗಿಂಡಿ ನರ್ತನ ಕಲಾವಿದರಾದ ನಾಡಾ ಸತೀಶ್ ನಾಯಕ್, ಚೇಂಪಿ ರಾಮಚಂದ್ರ ಅನಂತ ಭಟ್ ಉಡುಪಿ , ಪ್ರಶಾಂತ್ ಆಚಾರ್ಯ ಬಸ್ರುರು ಇವರು ಗಿಂಡಿನರ್ತನ ನೆಡೆಸಿಕೊಟ್ಟರು , ಹಿಮ್ಮೇಳನದ ಹಾಡುಗಾರಿಕೆಯಲ್ಲಿ ಸಗ್ರಿ ಗಣೇಶ್ ನಾಯಕ್ , ಸಗ್ರಿ ವಿನೀತ್ ನಾಯಕ್ , ಹಾರ್ಮೋನಿಯಂ ತೋನ್ಸೆ ದತ್ತಾತ್ರೇಯ ಕಿಣಿ  , ತಬಲಾದಲ್ಲಿ ಜಯದೇವ್ ಭಟ್ ಕಲ್ಯಾಣಪುರ ಸಹಕರಿಸಿದರು.

ದೇವಳದ ಪ್ರಧಾನ ಅರ್ಚಕರಾದ ವಿನಾಯಕ ಭಟ್ ,ಮೊಕ್ತೇಸರ ಪಿ ವಿ ಶೆಣೈ ,ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರು ವಿವಿಧ ಭಜನಾ ಮಂಡಳಿಯ ಸದಸ್ಯರು, ಜಿ ಎಸ್ ಬಿ ಮಹಿಳಾ ಮಂಡಳಿ ಸದಸ್ಯರು , ಯುವಕ ಮಂಡಳಿಯ ಸದಸ್ಯರು ನೂರಾರು ಸಮಾಜಭಾಂದವರು ಉಪಸ್ಥಿತರಿದ್ದರು.

 

No Comments

Leave A Comment