Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...
ಚಿನ್ನ ಕಳ್ಳಸಾಗಣೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ
ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.
ಇದಕ್ಕು ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ರನ್ಯಾ ರಾವ್ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.