ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಲ್ಪೆ ಜಿ.ಎಸ್.ಬಿ ಸಮಾಜದ ಶ್ರೀ ರಾಮ ಮಂದಿರದಲ್ಲಿ ಎ.6 ರ೦ದು ಶ್ರೀ ರಾಮ ನವಮಿ ಮಹೋತ್ಸವದ ಸ೦ಭ್ರಮ

ಉಡುಪಿ:ಎ.3, ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮಹೋತ್ಸವ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯು ಎ.6 ಆದಿತ್ಯವಾರ ನೆಡೆಯಲಿದೆ. ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ , ಕನಕಾಭಿಷೇಕ , ಗಂಗಾಭಿಷೇಕ , ಪಲಾಭಿಷೇಕ , ಹಾಗೂ ಸಾನಿಧ್ಯ ಹವನ ನೆಡೆಯಲಿದೆ.

ಶ್ರೀರಾಮ ದೇವರಿಗೆ ತೊಟ್ಟಿಲು ಸೇವೆ , ಭಜನಾ ಕಾರ್ಯಕ್ರಮ , ಪಲ್ಲ ಪೂಜೆ , ಮಹಾ ಪೂಜೆ ಬಳಿಕ ಮಹಾ ಸಮಾರಾಧನೆ ಜರಗಲಿದೆ.

ಸಂಜೆ ನೂತನ ರಜತ ಪಲ್ಲಕ್ಕಿಯಲ್ಲಿ ಪ್ರಥಮ ಪೇಟೆ ಪಲ್ಲಕ್ಕಿ ಉತ್ಸವವು ಈ ಬಾರಿಯ ಮೆರವಣಿಗೆಯಲ್ಲಿ ವಿಶೇಷ ಸ್ತಬ್ಧ ಚಿತ್ರ , ಕುಣಿತ ಭಜನೆ , ಗೊಂಬೆ ಬಳಗ , ಚಂಡೆವಾದನ , ವಿವಿಧ ವಾದ್ಯಮೇಳ ಜೊತೆಗೆ ವಿಶೇಷ ಆಕರ್ಷಕ ಮೆರವಣಿಗೆ ನೆಡೆಯಲಿದೆ.
ರಾತ್ರಿ ; ಶ್ರೀ ಪದ್ಮಾವತಿ ಗೋವಿಂದ ಮಂಟಪದಲ್ಲಿ ಶ್ರೀದೇವರ ವಸಂತಪೂಜೆ , ಅಷ್ಟಾವಧಾನ ಸೇವೆ ಮಹಾಪೂಜೆ , ಪ್ರಸಾದ ವಿತರಣೆ ನೆಡೆಯಲಿದೆ ಎಂದು ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರದ ಅಧ್ಯಕ್ಷರಾದ ಗೋಕುಲ್ ದಾಸ್ ಪೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

No Comments

Leave A Comment