ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

BDA ಎಕ್ಸಿಕ್ಯೂಟಿವ್ ಎಂಜಿನೀಯರ್ ಗೆ ಬೆದರಿಕೆ ಬ್ಲ್ಯಾಕ್ ಮೇಲ್: ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್

ಬೆಂಗಳೂರು: ಸುಲಿಗೆ ಹಾಗೂ ಬೆದರಿಕೆ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಮಾಸಿಕ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್‌ಪಿಕೆಎಲ್) ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ ಎನ್ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕನ್ನಡ ಮಾಸಿಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ಶರತ್ ಬಾಬು ಮತ್ತು ಗುರುಮೂರ್ತಿ ಎಂಬುವರು, ನಾನು ಮತ್ತು ನನ್ನ ಅಧೀನದಲ್ಲಿ ಕೆಲಸ ಮಾಡುತ್ತಿರುವ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಅಶೋಕ್ ಭಾಗಿ, ವರುಣ್, ಪರಶುರಾಮ್ ಬಿ ಎಚ್ ಮತ್ತು ಜಯದೀಪ್ ಎಚ್ ಪಿ ಅವರು ಲಂಚ ಸ್ವೀಕರಿಸಿ, ಕಳಪೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಅಶೋಕ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ನವೆಂಬರ್ 2024 ರಲ್ಲಿ ಅಶೋಕ್ ಅವರಿಂದ 27 ಲಕ್ಷ ರು ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದಾರೆ, ಒಂದು ವೇಳೆ ಹಣ ನೀಡಲು ವಿಫಲವಾದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಇಬ್ಬರು ತಮ್ಮ ಕಚೇರಿಗೆ ಭೇಟಿ ನೀಡಿ, ಹಣ ಕೊಡಲು ಸಾಧ್ಯವಾಗದಿದ್ದರೇ ಪರ್ಯಾಯ ಆಯ್ಕೆಯಾಗಿ ರಾಮನಗರದಲ್ಲಿ ಶೆಡ್ ನಿರ್ಮಿಸುವಂತೆ ಒತ್ತಾಯಿಸಿದ್ದರು ಎಂದು ಅಶೋಕ್ ದೂರಿನಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 10, 2024 ರಂದು, ಲೋಕಾಯುಕ್ತ ದೂರು ಸಲ್ಲಿಸುವುದಾಗಿ ವಾಟ್ಸಾಪ್ ಸಂದೇಶವನ್ನು ಕಳುಹಿಸಿದರು, ಅದರಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಮತ್ತು ಇನ್ನೊಬ್ಬ ನಿವೃತ್ತ ಎಂಜಿನಿಯರ್‌ಗಳ ಹೆಸರುಗಳು ಸೇರಿದ್ದವು, ನಂತರ, ಮಾರ್ಚ್ 25 ರಂದು, ಅವರು ಅಶೋಕ್ ಅವರ ಹೆಸರನ್ನು ದೂರಿನಲ್ಲಿ ಸೇರಿಸುವುದಾಗಿ ಎಚ್ಚರಿಸುವ ಮತ್ತೊಂದು ಸಂದೇಶವನ್ನು ಕಳುಹಿಸಿದ್ದನು ಎಂದು ಹೇಳಿದ್ದಾರೆ.

ಅಶೋಕ್ ತಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ, ಯೋಜನೆಯ ವಿವರಗಳನ್ನು ಪಡೆಯಲು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲು ಆರ್‌ಟಿಐ ಬಳಸುವುದಾಗಿ ಬಾಬು ಎಚ್ಚರಿಸಿದ್ದ ಎಂದು ಅಶೋಕ್ ತಿಳಿಸಿದ್ದಾರೆ. ಬಾಬು ಮತ್ತು ಗುರುಮೂರ್ತಿ ಸಂಬಂಧವಿಲ್ಲದ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಹಣ ನೀಡುವಂತೆ ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಆರ್‌ಟಿಐ ಅನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಅಶೋಕ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

No Comments

Leave A Comment