....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೈಂದೂರು: ಕಾರು ಮತ್ತು ಆಟೋರಿಕ್ಷಾ ನಡುವೆ ಢಿಕ್ಕಿ : ಚಾಲಕ ಗಂಭೀರ

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡು ಸ್ಥಳೀಯರ ಸಹಾಯದಿಂದ  ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ   ಕಾರ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ.

ಘಟನೆ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾ ಅಧಿಕಾರಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment