....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

PM Modi Sri Lanka Visit: ಶ್ರೀಲಂಕಾದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದ ಮೋದಿ

ಕೊಲಂಬೋ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಶ್ರೀಲಂಕಾ ಭೇಟಿ ಪೂರ್ಣಗೊಂಡಿದೆ. ಇಂದು ಅನುರಾಧಪುರದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದರು. ಶ್ರೀಲಂಕಾ ಪ್ರವಾಸದ ಕೊನೆಯ ದಿನವಾದ ಇಂದು ಬೆಳಗ್ಗೆ ಬೇಗನೆ ಅನುರಾಧಪುರಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ತೆರಳಿದ್ದರು.

ಇದಾದ ನಂತರ, ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ  ಜಂಟಿಯಾಗಿ ಮಹೋ-ಅನುರಾಧಪುರ ರೈಲು ಮಾರ್ಗದ ಸಿಗ್ನಲಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿದರು. ಇದು ಭಾರತ ಸರ್ಕಾರದ ಸಹಾಯದಿಂದ ಪೂರ್ಣಗೊಂಡ ಯೋಜನೆಯಾಗಿದೆ. ಪ್ರಧಾನಿ ಮೋದಿ ಅವರು ಮಹೋ-ಒಮಂಥೈ ರೈಲು ಮಾರ್ಗ ಉದ್ಘಾಟಿಸಿದರು. ಇಲ್ಲಿಂದ ಅವರು ರೈಲಿಗೆ ಹಸಿರು ನಿಶಾನೆ ತೋರಿದರು.

No Comments

Leave A Comment