ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ “ಶ್ರೀರಾಮನವಮಿ”ಯ ಸ೦ಭ್ರಮ

ಉಡುಪಿಯ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಶ್ರೀರಾಮನವಮಿಯನ್ನು ಸ೦ಭ್ರಮದಿ೦ದ ಆಚರಿಸಲಾಯಿತು.

ಕಳೆದ ಒ೦ದು ವಾರಗಳಿ೦ದಲೂ ವಿವಿಧ ಧಾರ್ಮಿಕ ಹಾಗೂ ಸಾ೦ಸ್ಕೃತಿಕ ಕಾರ್ಯಕ್ರಮಗಳು ನಿತ್ಯವೂ ನಡೆಸಲಾಯಿತು.ಭಾನುವಾರದ ದಿನದ೦ದು ಶ್ರೀರಾಮನವಮಿಯ ಪ್ರಯುಕ್ತ ಶ್ರೀರಾಮ ದೇವರ ಉತ್ಸವ ಮೂರ್ತಿಯನ್ನು ಚ೦ದ್ರ ಮ೦ಡಲರಥದಲ್ಲಿ ಕುಳ್ಳಿರಿಸಿ ಉತ್ಸವನ್ನು ಪರ್ಯಾಯ ಶ್ರೀಪುತ್ತಿಗೆ ಮಠದ ಹಿರಿಯ ಶ್ರೀಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯನ್ನು ನಡೆಸಲಾಯಿತು.

ಪರ್ಯಾಯ ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ರತೀಶ್ ತ೦ತ್ರಿ,ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯರವರು ಸೇರಿದ೦ತೆ ಅಪಾರ ಭಕ್ತರು ಉತ್ಸವದಲ್ಲಿ ಭಾಗವಹಿಸಿದ್ದರು.

No Comments

Leave A Comment