ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ; ವೈಭವದ ಪೇಟೆ ಉತ್ಸವ

ಮಲ್ಪೆ; ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮೊಹೋತ್ಸವ ಆಚರಣೆ , ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆ ಆದಿತ್ಯವಾರ ನೆಡೆಯಿತು.

ಬೆಳ್ಳಿಗೆ ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ , ಕನಕಾಭಿಷೇಕ , ಗಂಗಾಭಿಷೇಕ , ಪಲಾಭಿಷೇಕ , ಹಾಗೂ ಸಾನಿಧ್ಯ ಹವನ , ಶ್ರೀದೇವರಿಗೆ ವಿಶೇಷ ಅಲಂಕಾರ , ಹಾಗೂ ಶ್ರೀರಾಮ ದೇವರಿಗೆ ತೊಟ್ಟಿಲು ಸೇವೆ , ಭಜನಾ ಕಾರ್ಯಕ್ರಮ , ಪಲ್ಲ ಪೂಜೆ , ಮಹಾ ಪೂಜೆ ಬಳಿಕ ಮಹಾ ಸಮಾರಾಧನೆ ಜರಗಿತು.

ವೈಭವದ ಪೇಟೆ ಉತ್ಸವ ; ಸಂಜೆ ಶ್ರೀ ರಾಮ ಮಂದಿರದಿಂದ ಮಲ್ಪೆ ಮುಖ್ಯ ರಸ್ತೆಯಲ್ಲಿ ನೂತನ ರಜತ ಪಲ್ಲಕ್ಕಿಯಲ್ಲಿ ಪ್ರಥಮ ಪೇಟೆ ಪಲ್ಲಕ್ಕಿ ಉತ್ಸವದ ಮೆರವಣಿಗೆಯಲ್ಲಿ ವಿಶೇಷ ಸ್ತಬ್ಧ ಚಿತ್ರ , ತಟ್ಟಿರಾಯ , ಕೀಲುಕುದುರೆ , ಕುಣಿತ ಭಜನೆ , ಗೊಂಬೆ ಬಳಗ , ಚಂಡೆವಾದನ , ವಿವಿಧ ವಾದ್ಯಮೇಳ ಜೊತೆಗೆ ವಿಶೇಷ ಆಕರ್ಷಕ ಮೆರವಣಿಗೆಯ ಪೇಟೆ ಉತ್ಸವ ವೈಭವದಿಂದ ಜರಗಿತು ,ರಾತ್ರಿ ಕಟ್ಟೆ ಪೂಜೆ , ವಸಂತ ಪೂಜೆ , ಅಷ್ಟಾವಧಾನ ಸೇವೆ ಜರಗಿತು.

ಶ್ರೀ ದೇವರ ಸನ್ನಿಧಿಯಲ್ಲಿ ಮಂದಿರದ ಅರ್ಚಕರಾದ ಅರ್ಚಕರಾದ ಶೈಲೇಶ್ ಭಟ್ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು , ವೇದ ಮೂರ್ತಿ ಜಯದೇವ್ ಭಟ್ , ಲಕ್ಷ್ಮಣ ಭಟ್  ಸಹಕರಿಸಿದರು.

ಶ್ರೀ ರಾಮ ಮಂದಿರದ ಅಧ್ಯಕ್ಷರಾದ ಗೋಕುಲ್ ದಾಸ್ ಪೈ , ಜಿ ಎಸ್ ಬಿ ಮಹಿಳಾ ಮಂಡಳಿ ಅಧ್ಯಕ್ಷ ಶಾಲಿನಿ ಪೈ, ಎಮ್ ದೇವರಾಯ ಭಟ್ , ವಿ ಅನಂತ್ ಕಾಮತ್ , ಸುರೇಂದ್ರ ಭಂಡಾರ್ ಕಾರ್ , ಸುಧೀರ್ ಶೆಣೈ , ಅನಿಲ್ ಕಾಮತ್ , ಜಿ ಎಸ್ ಬಿ ಮಹಿಳಾ ಮಂಡಳಿ ಸದಸ್ಯರು , ಯುವಕ ಮಂಡಳಿಯ ಸದಸ್ಯರು ನೂರಾರು ಸಮಾಜಭಾಂದವರು ಉಪಸ್ಥಿತರಿದ್ದರು .

 

kiniudupi@rediffmail.com

No Comments

Leave A Comment