.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
PUC ಆರ್ಟ್ಸ್ ವಿಭಾಗದಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಲಾರಿ ಚಾಲಕನ ಪುತ್ರಿ!
ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್ನಲ್ಲಿ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.
ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.