ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

PUC ಆರ್ಟ್ಸ್ ವಿಭಾಗದಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಲಾರಿ ಚಾಲಕನ ಪುತ್ರಿ!

ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್‌ನಲ್ಲಿ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.‌

kiniudupi@rediffmail.com

No Comments

Leave A Comment