ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಮಲ್ಪೆ ಹೊಟೇಲ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ. ವೆಚ್ಚದ ವಸ್ತುಗಳು ಸುಟ್ಟು ಕರಕಲು

ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ  ಮಲ್ಪೆ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ.

ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ ಬೆಂಕಿಗಾಹುತಿಯಾಗಿದ್ದು, ಸುಮಾರು 15 ಲಕ್ಷ ರೂಪಾಯಿ ವೆಚ್ಚದ ವಸ್ತುಗಳು ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ಹೋಟೆಲ್ ಬಂದ್ ಮಾಡಿ ಹೋದ ನಂತರ ಫ್ರಿಡ್ಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳದಿಂದ ಬೆಂಕಿ ಹರಡದಂತೆ ರಕ್ಷಣಾ ಕಾರ್ಯ ನಡೆಸಿದರು.

No Comments

Leave A Comment