.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಲ್ಪೆ ಹೊಟೇಲ್ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ. ವೆಚ್ಚದ ವಸ್ತುಗಳು ಸುಟ್ಟು ಕರಕಲು
ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ.
ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ ಬೆಂಕಿಗಾಹುತಿಯಾಗಿದ್ದು, ಸುಮಾರು 15 ಲಕ್ಷ ರೂಪಾಯಿ ವೆಚ್ಚದ ವಸ್ತುಗಳು ಸುಟ್ಟು ಕರಕಲಾಗಿದೆ ಎನ್ನಲಾಗಿದೆ.
ಹೋಟೆಲ್ ಬಂದ್ ಮಾಡಿ ಹೋದ ನಂತರ ಫ್ರಿಡ್ಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳದಿಂದ ಬೆಂಕಿ ಹರಡದಂತೆ ರಕ್ಷಣಾ ಕಾರ್ಯ ನಡೆಸಿದರು.