ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಎರಡು ಮನೆಗಳಲ್ಲಿ ಚಿನ್ನಾಭರಣ ಕಳ್ಳತನ

ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಏ. 22 ರ ರಾತ್ರಿ ನಡೆದಿದೆ.

ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ.

ಇದೇ ಗ್ರಾಮದ ಕೋಡಿ ಮನೆ ನಿವಾಸಿ ಅನ್ವರ್ ಅವರ ಮನೆಗೂ ನುಗ್ಗಿದ ಕಳ್ಳ, ಮನೆ ಮಂದಿ ಮಲಗಿದ್ದಾಗಲೇ ಮನೆಯೊಳಗಿನ ಕಪಾಟನ್ನು ಜಾಲಾಡಿ, ಅದರಲ್ಲಿದ್ದ ನಗದು ಹಣವನ್ನು ತನ್ನ ಜೇಬಿಗೆ ತುಂಬಿಸಿಕೊಳ್ಳುವ ಭರದಲ್ಲಿ ಅಲ್ಲೇ ಕೆಳಕ್ಕೆ ಬೀಳಿಸಿದ್ದಾನೆ ಎನ್ನಲಾಗಿದೆ. ಆ ವೇಳೆ ಮನೆ ಯಜಮಾನಿ ಎಚ್ಚರಗೊಂಡಿದ್ದು, ಕಳ್ಳ ಓಡಿ ತಪ್ಪಿಸಿಕೊಂಡಿದ್ದಾನೆ.

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಯಿಸಿ ತನಿಖೆ ನಡೆಸುತ್ತಿದ್ದಾರೆ.

No Comments

Leave A Comment