.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಜಮ್ಮು-ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗಿಸಿದ್ದು, ನಾಶಪಡಿಸಲು ಹತಾಶ ಯತ್ನ ನಡೆಸುತ್ತಿದ್ದಾರೆ: ಪ್ರಧಾನಿ ಮೋದಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಇದರಿಂದಾಗಿ ನಾಶಪಡಿಸಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾನುವಾರ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿಯವರು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಇದೇ ವೇಳೆ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಗುತ್ತೆ, ಉಗ್ರರಿಗೆ ಕಠಿಣ ಶಿಕ್ಷೆ ಕೊಟ್ಟೇ ಕೊಡುತ್ತೇವೆಂದು ಭರವಸೆ ನೀಡಿದಿದ್ದಾರೆ.