....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, ಹಲವರಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾನೆಂದು ವರದಿಯಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment