.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, ಹಲವರಿಗೆ ಗಾಯ
ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾನೆಂದು ವರದಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.