ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬಂಟ್ವಾಳ : ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ – ಸಾವಿರಾರು ಕಾರ್ಯಕರ್ತರು ಭಾಗಿ
ಬಂಟ್ವಾಳ:ಮೇ.02: ಮಂಗಳೂರಿನ ಬಜ್ಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅವರ ಪ್ರಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಎಲ್ಲಾ ಅಂಗಡಿಗಳು ಬಂದ್ ಆಗಿದ್ದು, ಬೆರಳೆಣಿಕೆಯಷ್ಟು ಖಾಸಗಿ ವಾಹನಗಳು ಮಾತ್ರ ಸಂಚರಿಸುತ್ತಿದೆ. ಬಿಸಿರೋಡಿನಲ್ಲಿ ಬಸ್ ವ್ಯವಸ್ಥೆ ಇಲ್ಲದೆ ಬಾಕಿಯಾದ ವಿದ್ಯಾರ್ಥಿಗಳನ್ನು ಹಾಗೂ ಹಿರಿಯ ನಾಗರಿಕರನ್ನು ಸಂಘಟನೆಯ ಕಾರ್ಯಕರ್ತರು ವಾಹನಗಳ ಮೂಲಕ ಕಲಿಸಿಕೊಡುವ ವ್ಯವಸ್ಥೆ ಕಲ್ಪಿಸಿದ್ದರು.
ಇನ್ನು ಸ್ಥಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಐಜಿ ಅಮಿತ್ ಸಿಂಗ್ , ಎಸ್.ಪಿ.ಯತೀಶ್ ಎನ್ , ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಎಸ್.ಐ.ರಾಮಕೃಷ್ಣ ಅವರು ಬಂಟ್ವಾಳ ದಲ್ಲಿ ಮೊಕ್ಕಾಂ ಹೂಡಿದ್ದಾರೆ.