......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯಕ್ಕೆ ಶಿಲಾನ್ಯಾಸ ಲೋಕಾರ್ಪಣೆ

ಉಡುಪಿ:ಉಡುಪಿ ಕ್ಷೇತ್ರದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಬೃಂದಾವನ ಪ್ರತಿಷ್ಠಾಪನೆಯಾಗಿ ಶತಮಾನಗಳು ಗತಿಸುತ್ತಿರುವ ಹಿನ್ನಲೆಯಲ್ಲಿ ಇದರ ಸ್ಮರಣಾರ್ಥ ಧಾರ್ಮಿಕ ಭವನ-ವಸತಿ ನಿಲಯ ಲೋಕಾರ್ಪಣೆ ಮಾಡಲು ನಿಶ್ಚಯಿಸಲಾಗಿದ್ದು ಆ ಪ್ರಯುಕ್ತ ಮೇ 2  ಶುಕ್ರವಾರದ೦ದು ಉಡುಪಿ ಕನಕದಾಸ ರಸ್ತೆ ಸಮೀಪವಿರುವ ಸ್ಥಳದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು .

ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರು , ಕಿರಿಯ ಪಟ್ಟದ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಸಮಕ್ಷಮ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿದರು.

ಪುತ್ತಿಗೆ ಮಠದ ಪ್ರಸನ್ನ ಆಚಾರ್ಯ,ರಾಘವೇ೦ದ್ರ ಮಠದ ಜಯತೀರ್ಥ ಆಚಾರ್ಯರವರು ಸೇರಿದ೦ತೆ ಮಠದ ಅಭಿಮಾನಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

 

No Comments

Leave A Comment