ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.
ಸೇನಾ ಕಾರ್ಯಾಚರಣೆಯ ಲೈವ್ ಕವರೇಜ್ ಬೇಡ: ಟಿವಿ ಚಾನೆಲ್ಗಳಿಗೆ ರಕ್ಷಣಾ ಇಲಾಖೆ ಸೂಚನೆ
ನವದೆಹಲಿ, ಮೇ 9: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ ಹಾಗೂ ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಸುದ್ದಿವಾಹಿನಿಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಕಳುಹಿಸಿರುವ ರಕ್ಷಣಾ ಇಲಾಖೆ, ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುವುದರಿಂದ ಈ ಸೂಚನೆ ನೀಡಲಾಗಿದೆ ಎಂದಿದೆ.
ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ರಿಯಲ್ ಟೈಮ್ ರಿಪೋರ್ಟ್ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಅಂತಹ ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವಕ್ಕೆ ಅಪಾಯ ಉಂಟುಮಾಡಬಹುದು ಮತ್ತು ಸೇನಾ ಸಿಬ್ಬಂದಿ ಜೀವಗಳಿಗೆ ಅಪಾಯವನ್ನು ಉಂಟುಮಾಡಬಹುದು ಎಂದು ರಕ್ಷಣಾ ಇಲಾಖೆ ಹೇಳಿದೆ.
ಕಾರ್ಗಿಲ್ ಯುದ್ಧ, 26/11 ದಾಳಿಗಳು ಮತ್ತು ಕಂದಹಾರ್ ಅಪಹರಣದಂತಹ ಹಿಂದಿನ ಘಟನೆಗಳು ನೇರ ಪ್ರಸಾರದ ಅಪಾಯಗಳನ್ನು ಮನವರಿಕೆ ಮಾಡಿಕೊಟ್ಟಿವೆ. ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ತಿದ್ದುಪಡಿ) ನಿಯಮಗಳು, 2021 ರ ಷರತ್ತು 6(1)(p) ಪ್ರಕಾರ, ಭಯೋತ್ಪಾದನಾ-ನಿಗ್ರಹ ಕಾರ್ಯಾಚರಣೆಗಳ ಸಮಯದಲ್ಲಿ ಗೊತ್ತುಪಡಿಸಿದ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಲು ಅನುಮತಿಸಲಾಗಿದೆ. ಎಲ್ಲಾ ಮಾಧ್ಯಮಗಳು ರಾಷ್ಟ್ರದ ಸೇವೆ ಸಂಬಂಧಿತ ಅತ್ಯುನ್ನತ ಮಾನದಂಡಗಳನ್ನು ಎತ್ತಿಹಿಡಿಯುವ ಮೂಲಕ ಕವರೇಜ್ನಲ್ಲಿ ಜಾಗರೂಕತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯನ್ನು ಕಾಪಾಡಬೇಕು ಎಂದು ಆಗ್ರಹಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.