ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ದೇಶಕ್ಕಿಂತ ಕ್ರಿಕೆಟ್ ದೊಡ್ಡದಲ್ಲ: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಭಾರತ ಹಾಗೂ ಪಾಕ್ ನಡುವೆ ಯುದ್ಧ ಭೀತಿ ಇರುವುದರಿಂದ 2025ನೇ ಸಾಲಿನ ಐಪಿಎಲ್​ನ ಅರ್ಧಕ್ಕೆ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಈ ವಿಚಾರ ಕ್ರಿಕೆಟ್ ಪ್ರೇಮಿಗಳಿಗೆ ಸಾಕಷ್ಟು ನೋವನ್ನು ತಂದಿದೆ.

ಪಂಜಾಬ್​ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್​ಗೆ ಫ್ಲಡ್​ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್​ನ ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು.ಇದು ಮುಂದಿನ ಪಂದ್ಯಗಳ ಮೇಲೂ ಪರಿಣಾಮ ಬೀರಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಬಿಸಿಸಿಐ ಇಂದು (ಮೇ 9) ಮಹತ್ವದ ಸಭೆ ನಡೆಸಿ ಪಂದ್ಯವನ್ನು ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಭಾರತ ಹಾಗೂ ಪಾಕ್ ಮಧ್ಯೆ ಯುದ್ಧ ಭೀತಿ ಶುರವಾಗಿದೆ. ಪಹಲ್ಗಾಮ್​ನಲ್ಲಿ ನಡೆದ ದಾಳಿಗೆ ಭಾರತ ಪ್ರತಿ ದಾಳಿ ನಡೆಸಿ ಉಗ್ರರರ ನೆಲೆಯನ್ನು ನಾಶ ಮಾಡಿತು. ಆ ಬಳಿಕ ಭಾರತದ ಸೇನಾ ನೆಲೆಗಳ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಎಲ್ಲಾ ಕಾರಣದಿಂದ ಯುದ್ಧ ಭೀತಿ ಶುರುವಾಗಿದ್ದು, ಬಿಸಿಸಿಐ ಐಪಿಎಲ್ ರದ್ದು ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​​ನಲ್ಲಿ ಎರಡನೇ ಸ್ಥಾನದಲ್ಲಿ ಇತ್ತು. ಈ ಮೂಲಕ ಕಪ್ ಗೆಲ್ಲುವ ಕನಸನ್ನು ಕಾಣುತ್ತಿತ್ತು. ಈ ಮೂಲಕ 18 ವರ್ಷಗಳ ಕಪ್ ಗೆಲ್ಲುವ ಕನಸು ನನಸಾಗಲಿದೆ ಎಂದು ಆರ್​ಸಿಬಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಐಪಿಎಲ್ ಪಂದ್ಯವೇ ರದ್ದಾಗಿ ಹೋಗಿರುವುದು ಆರ್​ಸಿಬಿ ಅಭಿಮಾನಿಗಳ ಕನಸಿಗೆ ತಣ್ಣೀರು ಎರಚಿದಂತೆ ಆಗಿದೆ.

No Comments

Leave A Comment