ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಛತ್ತೀಸ್​ಗಢದಲ್ಲಿ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು, 11 ಜನರಿಗೆ ಗಾಯ

ರಾಯ್​ಪುರ, ಮೇ 12: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.

ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಮಾತನಾಡಿ, ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು.

ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಲಾರಿ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್‌ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಅವರು ಜಿಲ್ಲಾಡಳಿತದ ಅಧಿಕಾರಿಗಳು ಕೂಡ ಸ್ಥಳಕ್ಕೆ ತಲುಪಿದ್ದಾರೆ.

ಅಪಘಾತದಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

No Comments

Leave A Comment