.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ರಾಯರ ದರ್ಶನ ಪಡೆದು ವಾಪಸ್​ ಬರುವಾಗ ಅಪಘಾತ: ಬಿಜೆಪಿ ಮುಖಂಡ ಸೇರಿ ಮೂವರ ಸಾವು

ತುಮಕೂರು:ಮೇ 19: ಆಂಧ್ರದ  ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿಯ (BJP) ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ನಿವಾಸಿಗಳು ಎಂದು ತಿಳಿದುಬಂದಿದೆ. ನವೀನ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆರೂ ಜನ ಇನೋವಾ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್​ ಬರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

No Comments

Leave A Comment