37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಸುಧೀರ್ ಕುಮಾರ್ ರೆಡ್ಡಿ ನೂತನ ಮಂಗಳೂರು ಕಮಿಷನರ್

ಉಡುಪಿ: ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್‌ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.

No Comments

Leave A Comment