ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಿಜೋರಾಂ ಮಾಜಿ ರಾಜ್ಯಪಾಲರಿಂದ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಮಂದಿರ ಭೇಟಿ
ಉಡುಪಿ: ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಗುರುದೇವರ ದರ್ಶನ ಪಡೆದರು. ಸನ್ನಿಧಾನದಿಂದ ಶ್ರೀ ಗುರುದೇವರ ಪ್ರಸಾದ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ, ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್, ಅರ್ಚಕ ಅಮಿತ್ ಶುಕ್ಲಾ, ತಾರಾನಾಥ್ ಮೇಸ್ತ ಶಿರೂರು, ವಿಶ್ವನಾಥ್ ತೊಟ್ಟಂ ಹಾಗೂ ಮೊದಲಾದವರು ಉಪಸ್ಥಿತರಿದ್ದರು.