......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಮಿಜೋರಾಂ ಮಾಜಿ ರಾಜ್ಯಪಾಲರಿಂದ ಉಡುಪಿ ಶ್ರೀ ಭಗವಾನ್ ನಿತ್ಯಾನಂದ‌ ಮಂದಿರ ಭೇಟಿ

ಉಡುಪಿ: ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಗುರುದೇವರ ದರ್ಶನ ಪಡೆದರು. ಸನ್ನಿಧಾನದಿಂದ ಶ್ರೀ ಗುರುದೇವರ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ, ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾಧ್ಯಕ್ಷ‌ ರಾಧಾಕೃಷ್ಣ ಮೆಂಡನ್, ಅರ್ಚಕ ಅಮಿತ್ ಶುಕ್ಲಾ, ತಾರಾನಾಥ್ ಮೇಸ್ತ ಶಿರೂರು, ವಿಶ್ವನಾಥ್ ತೊಟ್ಟಂ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment