.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಿಜೋರಾಂ ಮಾಜಿ ರಾಜ್ಯಪಾಲರಿಂದ ಉಡುಪಿ ಶ್ರೀ ಭಗವಾನ್ ನಿತ್ಯಾನಂದ‌ ಮಂದಿರ ಭೇಟಿ

ಉಡುಪಿ: ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಗುರುದೇವರ ದರ್ಶನ ಪಡೆದರು. ಸನ್ನಿಧಾನದಿಂದ ಶ್ರೀ ಗುರುದೇವರ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ, ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲಾಧ್ಯಕ್ಷ‌ ರಾಧಾಕೃಷ್ಣ ಮೆಂಡನ್, ಅರ್ಚಕ ಅಮಿತ್ ಶುಕ್ಲಾ, ತಾರಾನಾಥ್ ಮೇಸ್ತ ಶಿರೂರು, ವಿಶ್ವನಾಥ್ ತೊಟ್ಟಂ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment