...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಕಲಬುರಗಿ: ಕೋರ್ಟ್ ಹಾಲ್ ಗೆ ಬರುವ ಮುನ್ನ ಹೃದಯಾಘಾತ; ನ್ಯಾಯಾಧೀಶ ಸಾವು

ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು.

ಆದರೆ ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ. ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

No Comments

Leave A Comment