ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....
ಕಲಬುರಗಿ: ಕೋರ್ಟ್ ಹಾಲ್ ಗೆ ಬರುವ ಮುನ್ನ ಹೃದಯಾಘಾತ; ನ್ಯಾಯಾಧೀಶ ಸಾವು
ಕಲಬುರಗಿ: ಕೋರ್ಟ್ ಹಾಲ್ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್ಗೆ ಬಂದಿದ್ದರು.
ಆದರೆ ಕೋರ್ಟ್ ಹಾಲ್ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ. ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.