....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನೆಲಮಂಗಲ: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾವು

ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment