....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಅಹಮದಾಬಾದ್ ವಿಮಾನ ದುರಂತ: 87 ಶವಗಳ ಗುರುತು ಪತ್ತೆ; 47 ಮೃತದೇಹ ಹಸ್ತಾಂತರ

ಅಹಮದಾಬಾದ್:ಜೂ.16, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ರಾಜಸ್ಥಾನ ಮತ್ತು ಗುಜರಾತ್‌ನ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸಂಪೂರ್ಣ ಸುಟ್ಟು ಕರಕಲಾಗಿವೆ. ಮತ್ತು ರುಂಡ-ಮುಂಡ, ಕೈ-ಕಾಲುಗಳು ಬೇರೆ ಬೇರೆಯಾಗಿ ಛಿದ್ರವಾಗಿದೆ. ಆದ್ದರಿಂದ ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ. ಮೃತಪಟ್ಟವರ ಸಂಬಂಧಿಕರು ಸಿವಿಲ್ ಆಸ್ಪತ್ರೆಗೆ ಬಂದು ತಮ್ಮ ಡಿಎನ್‌ಎ ನಮೂನೆಗಳನ್ನು ನೀಡಿ ಆಸ್ಪತ್ರೆಯ ಆವರಣದಲ್ಲಿ ನಾಲ್ಕು ದಿನದಿಂದ ಕಾಯುತ್ತಿದ್ದಾರೆ.

No Comments

Leave A Comment