.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಕಾರ್ಮಿಕರು ನಾಪತ್ತೆ, ಕೊಚ್ಚಿಹೋಗಿರುವ ಶಂಕೆ

ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಒಂಬತ್ತು ರಸ್ತೆ ನಿರ್ಮಾಣ ಕಾರ್ಮಿಕರು ಕೊಚ್ಚಿಹೋಗಿರುವ ಶಂಕೆಯಿದೆ.

ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಬಾರ್ಕೋಟ್ ಪ್ರದೇಶದ ಸಿಲೈ ಬೆಂಡ್ ಬಳಿ ಭಾರೀ ಮಳೆ ಮತ್ತು ಮೇಘಸ್ಫೋಟದ ಪರಿಣಾಮವಾಗಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಉತ್ತರಕಾಶಿಯ ವಿಪತ್ತು ನಿಯಂತ್ರಣ ಕೊಠಡಿ ತಿಳಿಸಿದೆ.

ಯಮುನೋತ್ರಿ ಹೆದ್ದಾರಿಯಲ್ಲಿ ಮೇಘಸ್ಫೋಟದ ಬಗ್ಗೆ ಮಧ್ಯರಾತ್ರಿಯ ಸುಮಾರಿಗೆ ಮಾಹಿತಿ ಬಂದಿದೆ ಎಂದು ಬಾರ್ಕೋಟ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೀಪಕ್ ಕಥೈತ್ ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ತಂಡವು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಅಲ್ಲಿ ಡೇರೆಗಳನ್ನು ಹಾಕಿಕೊಂಡು ವಾಸಿಸುತ್ತಿದ್ದರು. ಅವರು ಭಾರೀ ಮಳೆಗೆ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ ಎಂಟರಿಂದ ಒಂಬತ್ತು ಜನರು ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಮಿಕರೆಲ್ಲರೂ ನೇಪಾಳಿ ಮೂಲದವರಾಗಿದ್ದು, ಹುಡುಕಾಟ ನಡೆಯುತ್ತಿದೆ. ಮೇಘಸ್ಫೋಟದ ನಂತರ ಸಿಲೈ ಬೆಂಡ್ ಸೇರಿದಂತೆ ಹಲವು ಸ್ಥಳಗಳಲ್ಲಿ ಹೆದ್ದಾರಿಯನ್ನು ಮುಚ್ಚಲಾಗಿದೆ.

No Comments

Leave A Comment