ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಆಂಧ್ರದಲ್ಲಿ ಭೀಕರ ಅಪಘಾತ: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಬರುತ್ತಿದ್ದ ಚಿಕ್ಕಬಳ್ಳಾಪುರದ ಮೂವರು ಸಾವು
ಚಿಕ್ಕಬಳ್ಳಾಪುರ: ಜೂನ್ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದವರು ಎಂದು ಗುರುತಿಸಲಾಗಿದೆ.