ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನ ಮತ್ತೆ ಬಿಜೆಪಿ ತೆಕ್ಕೆಗೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ 87 ಜನರು ಪಾಲ್ಗೊಂಡಿದ್ದರು. ಈ ಪೈಕಿ ಕಾಂಗ್ರೆಸ್​ ನ ಸುವರ್ಣಾ ಕಲಕುಂಟ್ಲಾ ವಿರುದ್ಧ ಬಿಜೆಪಿಯ ಜ್ಯೋತಿ ಪಾಟೀಲ್ ಅವರು 47 ಮತಗಳನ್ನು ಪಡೆದಿದ್ದರೆ ಸಂತೋಷ ಚವ್ಹಾಣ್ ಅವರು ಸಹ 47 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದು ಈ ಮೂಲಕ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

No Comments

Leave A Comment