ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನ ಮತ್ತೆ ಬಿಜೆಪಿ ತೆಕ್ಕೆಗೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ 87 ಜನರು ಪಾಲ್ಗೊಂಡಿದ್ದರು. ಈ ಪೈಕಿ ಕಾಂಗ್ರೆಸ್​ ನ ಸುವರ್ಣಾ ಕಲಕುಂಟ್ಲಾ ವಿರುದ್ಧ ಬಿಜೆಪಿಯ ಜ್ಯೋತಿ ಪಾಟೀಲ್ ಅವರು 47 ಮತಗಳನ್ನು ಪಡೆದಿದ್ದರೆ ಸಂತೋಷ ಚವ್ಹಾಣ್ ಅವರು ಸಹ 47 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದು ಈ ಮೂಲಕ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

No Comments

Leave A Comment